ಬಂಟ್ವಾಳ: ಮನೆಯಲ್ಲಿ ಯಾರು ಇಲ್ಲದ ವೇಳೆ ಮಹಿಳೆಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎ.13 ರಂದು ಬುಧವಾರ ಸಂಜೆ ವೇಳೆ ನಡೆದಿದೆ.

ಪಿಲಾತಬೆಟ್ಟು ಗ್ರಾಮದ ನಯನಾಡು ನಿವಾಸಿ ಹರಿಪ್ರಸಾದ್ ಅವರ ಪತ್ನಿ ಜಯಲಕ್ಮೀ ಆತ್ಮಹತ್ಯೆ ಮಾಡಿಕೊಂಡ ಮಹಿಳೆ.

ಬುಧವಾರ ಸಂಜೆ ಮನೆಯೊಳಗೆ ನೇಣು ಬಿಗಿದು ಅವರು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಅವರ ಪತಿ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ.

ನನ್ನ ಪತ್ನಿ ಆತ್ಮಹತ್ಯೆ ಮಾಡಿಕೊಂಡು ಸಾಯಲು ವ್ಯಕ್ತಿಯೋರ್ವನ ದುಷ್ಪೇರಣೆ ಕಾರಣವಾಗಿದೆ ಎಂದು ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ಮೌಖಿಕವಾಗಿ ದೂರು ನೀಡಿದ ಈ ಬಗ್ಗೆ ತನಿಖೆ ನಡೆಸುವಂತೆ ತಿಳಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ರವಿ ಎಂಬಾತನ ಬಗ್ಗೆ ಸಂಶಯವಿದ್ದು, ಪತ್ನಿ ಜೊತೆ ಈತ ಸಲುಗೆಯಿಂದ ಇದ್ದು ಇಬ್ಬರಿಗೂ ಬುದ್ದಿವಾದ ಹೇಳಿದ್ದೆ. ಆದರೆ ಇತ್ತೀಚಿಗೆ ಪತ್ನಿ ಈತನ ಕಾಟ ತಾಳಲಾರದೆ ಮಾನಸಿಕವಾಗಿ ನೊಂದಿದ್ದಳು. ಹಾಗಾಗಿ ಪತ್ನಿಯನ್ನು ಏಕಾಂಗಿ ಯಾಗಿ ಬಿಟ್ಟು ಹೋಗುತ್ತಿರಲಿಲ್ಲ. ಆದರೆ ನಿನ್ನೆ ಅಗತ್ಯವಾಗಿ ಹೊರಗೆ ಹೋಗಲು ಇದ್ದ ಕಾರಣ ಹೋಗಿ ವಾಪಾಸು ಬರುವ ವೇಳೆ ಈಕೆ ಆತ್ಮಹತ್ಯೆ ಮಾಡಿಕೊಂಡಿದ್ದಳು ಎಂದು ತಿಳಿಸಿದ್ದಾರೆ

By admin

Leave a Reply

Your email address will not be published. Required fields are marked *

error: Content is protected !!