ವಿಟ್ಲ: ಬಿಜೆಪಿಯವರು ಅಶೋಕ್ ರೈ ಯನ್ನು ಹೇಗಾದರೂ ಮಾಡಿ ಸೋಲಿಸಬೇಕು ಮತ್ತು ನನ್ನ ಆತ್ಮಸ್ಥೈರ್ಯ ಕುಗ್ಗಿಸಲು ನನ್ನ ಮನೆಗೆ ಐಟಿ ದಾಳಿ ನಡೆಸಿದ್ದು, ಇಂತಹ ಬೆದರಿಕೆಗಳಿಗೆ ನಾನು ಜಗ್ಗುವುದಿಲ್ಲ ಎಂದು ಕಾಂಗ್ರಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಹೇಳಿದರು.

ಅವರು ವಿಟ್ಲದ ಚಂದಳಿಕೆಯಲ್ಲಿ ನಡೆದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಕಣ್ಣೀರು ಹಾಕುತ್ತಾ ಘಟನೆ ಬಗ್ಗೆ ವಿವರಿಸಿದರು.
ನಾನು ಚುನಾವಣಾ ಪ್ರಚಾರದಲ್ಲಿದ್ದ ವೇಳೆ ನನ್ನ ಮನೆ ಮತ್ತು ಕಚೇರಿಗೆ ದಾಳಿ ನಡೆಸಿದ ಅಧಿಕಾರಿಗಳು ಹಣಕ್ಕಾಗಿ ಜಾಲಾಡಿದ್ದು, ಮನೆಯಲ್ಲಿ ಕೇವಲ 30 ರೂ. ಮತ್ತು ಕಚೇರಿಯಲ್ಲಿ ಸಿಬ್ಬಂದಿಗಳಿಗೆ ವೇತನ ನೀಡಲು ಇಟ್ಟಿದ್ದ 1.80 ಲಕ್ಷ ರೂ. ಸಿಕ್ಕಿದ್ದು, ಅದನ್ನು ಕೊಂಡೊಯ್ದಿದ್ದಾರೆ. ಸತತ ಎರಡು ದಿನಗಳ ಕಾಲ ದಾಳಿ ನಡೆಸಿದ್ದಾರೆ. ನನ್ನನ್ನು ಹೇಗಾದರೂ ಮಾಡಿ ಜೈಲಿಗಟ್ಟಬೇಕು ಎಂದು ಈ ರೀತಿ ಮಾಡಲಾಗಿದೆ. ಆದರೆ ದೇವರು ನನ್ನ ಕೈ ಬಿಟ್ಟಿಲ್ಲ. ನಾನು ಪ್ರಮಾಣಿಕವಾಗಿ ಕೆಲಸ ಮಾಡುತ್ತಿದ್ದು, ಕೋಟ್ಯಾಂತರ ರೂ. ಆದಾಯ ತೆರಿಗೆ ಕಟ್ಟುತ್ತಿದ್ದೇನೆ. ದೇವರ ಮತ್ತು ಜನರ ಆಶೀರ್ವಾದ ಇರುವರೆಗೂ ನನ್ನನ್ನು ಈ ರೀತಿಯಾಗಿ ಹಣಿಯಲು ಯಾರಿಂದಲೂ ಸಾಧ್ಯವಿಲ್ಲ ಎಂದರು.

By admin

Leave a Reply

Your email address will not be published. Required fields are marked *

error: Content is protected !!