ಚಿಕ್ಕಮಗಳೂರು: ವಿಧಾನಸಭೆಯಲ್ಲಿ ಭರ್ಜರಿ ಜಯಗಳಿಸಿದ ಕಾಂಗ್ರೆಸ್, ಆಡಳಿತ ಚುಕ್ಕಾಣಿ ಹಿಡಿದಿದೆ. ಅದರಂತೆ ನೂತನ ಸಭಾಧ್ಯಕ್ಷರಾದ ಉಳ್ಳಾಲ ಕ್ಷೇತ್ರದ ಯು.ಟಿ ಖಾದರ್ ಸಭಾಧ್ಯಕ್ಷರಾಗಿದ್ದಾರೆ. ಇದೀಗ ಸ್ಪೀಕರ್ ಖಾದರ್ ವಿರುದ್ದ ಫೇಸ್ಬುಕ್ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಲಾಗಿದೆ. ಹೌದು ಶ್ರೀರಾಮಸೇನೆ ಮುಖಂಡ ಪ್ರೀತೇಶ್ ಎಂಬಾತ ಖಾದರ್ ವಿರುದ್ಧ ಪೋಸ್ಟ್ ಮಾಡಿದ್ದಾನೆ. ಈ ಹಿನ್ನಲೆ ಇದೀಗ ಕಾಂಗ್ರೆಸ್ ಕಾರ್ಯಕರ್ತರು ಚಿಕ್ಕಮಗಳೂರು ನಗರದ ಸೆನ್ ಠಾಣೆಯಲ್ಲಿ ಪ್ರೀತೇಶ್ ವಿರುದ್ದ ದೂರು ಸಲ್ಲಿಸಿದ್ದಾರೆ. ಈ ಕೂಡಲೇ ಇತನ ವಿರುದ್ದ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ಪೋಸ್ಟ್​ನಲ್ಲಿ ಏನಿದೆ?

ನೂತನ ಸಭಾಧ್ಯಕ್ಷ ಸ್ಥಾನವನ್ನ ಯು.ಟಿ ಖಾದರ್ ಅಲಂಕರಿಸಿದ್ದಾರೆ. ಇದೇ ಮೊದಲ ಬಾರಿಗೆ ಅಲ್ಪಸಂಖ್ಯಾತರಿಗೆ ಈ ಅವಕಾಶ ನೀಡಲಾಗಿದೆ. ಈ ಮದ್ಯೆ ಇದೀಗ ಶ್ರೀರಾಮಸೇನೆ ಮುಖಂಡ ಪ್ರೀತೇಶ್ ಎಂಬಾತ ‘ಸದನದಲ್ಲಿ ಸಭಾಧ್ಯಕ್ಷರೇ ಅನ್ನಬೇಕಾ ಅಥವಾ ಸಾಬಾಧ್ಯಕ್ಷರೇ ಅನ್ನಬೇಕಾ? ಎಂಬತಹ ಅವಹೇಳನಕಾರಿ ಪೋಸ್ಟ್​ ಮಾಡಿದ್ದಾನೆ. ಇತನ ಕುರಿತು ಈ ಕೂಡಲೇ ಸೂಕ್ತ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್​ ಕಾರ್ಯಕರ್ತರು ಶ್ರೀರಾಮಸೇನೆ ಮುಖಂಡ ಪ್ರೀತೇಶ್ ವಿರುದ್ಧ ಪ್ರಕರಣ ದಾಖಲು ಮಾಡಿದ್ದಾರೆ.

By admin

Leave a Reply

Your email address will not be published. Required fields are marked *

error: Content is protected !!