ಟಾಸ್ಕ್ ಪೆರುವಾಯಿ ಕ್ಲಬ್ ವತಿಯಿಂದ ಬೃಹತ್ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ಸದ್ಯದ ರಕ್ತದ ಅಭಾವವನ್ನು ಮನಗಂಡು ರಕ್ತದಾನ ಕಾರ್ಯಕ್ರಮ ಏರ್ಪಡಿಸಿ ಸುಮಾರು 55 ರಷ್ಟು ರಕ್ತದಾನಿಗಳು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಯಾಗಿದ್ದು, ಕಾರ್ಯಕ್ರಮದಲ್ಲಿ ಕ್ಲಬ್ಬ್ ಪದಾಧಿಕಾರಿಗಳು, ಸದಸ್ಯರು, ಊರ ಹಿರಿಯರು, ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ ಕಿರಣ್ ಕುಮಾರ್ ಎಂ, ಜಿಲ್ಲಾ ಕ್ಷಯ ಮತ್ತು ಏಡ್ಸ್ ನಿಯಂತ್ರಣ ಅಧಿಕಾರಿ ಡಾ ಬದ್ರುದ್ದೀನ್ ಎಂ ಎನ್, ಬದ್ರಿಯಾ ಜುಮಾ ಮಸೀದಿ ಖತೀಬ ಬಹು ಅಲ್ ಹಾಜ್ ಶರೀಫ್ ಮದನಿ ಉಸ್ತಾದ್, ಮುಹಿಯದ್ದೀನ್ ಜುಮಾ ಮಸೀದಿಯ ಬಹು /ಜಾಫರ್ ಸಾದಿಕ್ ಬಾಖವಿ ಉಸ್ತಾದ್, ನಾಗೇಶ್ ಮಾಸ್ಟರ್, ಪೆರುವಾಯಿ ಗ್ರಾ.ಪಂ. ಅಧ್ಯಕ್ಷ ಬಾಲಕೃಷ್ಣ ಪೂಜಾರಿ, ಕನ್ನಡ ರಾಜ್ಯೋತ್ಸವ ಪುರಸ್ಕೃತ ವಿಲ್ಪ್ರೆಡ್ ಡಿ ಸೋಜಾ ಪೆರುವಾಯಿ ಮೊದಲಾದವರು ಈ ಸಂದರ್ಭ ಉಪಸ್ಥಿತರಿದ್ದರು.