ಉಳ್ಳಾಲ : ಕಾಸರಗೋಡಿನ ಕುಂಬಳೆಯಿಂದ ಸೋಮವಾರ ಸಂಜೆ ದಿಢೀರ್ ನಾಪತ್ತೆಯಾಗಿದ್ದ ಯುವಕನ ಮೃತದೇಹ ಉಳ್ಳಾಲ ತೊಕ್ಕೊಟ್ಟು ಬಳಿ ನೇತ್ರಾವತಿ ನದಿ ತೀರದಲ್ಲಿ ಪತ್ತೆಯಾಗಿದೆ.

ಕುಂಬಳೆ ಬಂಬ್ರಾಣ ಕಲ್ಕುಲ ನಿವಾಸಿ ಕಲ್ಲಿನ ಮೇಸ್ತ್ರಿ ಕೆಲಸ ಮಾಡುತ್ತಿರುವ ಲೋಕೇಶ್ – ಪ್ರಭಾವತಿ ದಂಪತಿಯ ಪುತ್ರ ರಾಜೇಶ್ (26) ಎಂಬವರ ಮೃತದೇಹ ಇದಾಗಿದೆ.
ಮೃತ ರಾಜೇಶ್ ಮೇಸ್ತ್ರೀ ಕೆಲಸ ಮಾಡುತ್ತಿದ್ದು, ಸಾಮಾಜಿಕ ಕಾರ್ಯಗಳಲ್ಲಿ ತನ್ನನು ತಾನು ತೊಡಗಿಸಿಕೊಂಡಿದ್ದ.

ಯುವಶಕ್ತಿ ಸೇವಾ ಪಥದ ಮೂಲಕ ನೊಂದ ಹೃದಯಗಳಿಗೆ ನೆರವನ್ನು ನೀಡುವಲ್ಲಿ ಸಹಕಾರಿಯಾಗಿದ್ದರು.

ಊರಿನ ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿ ದುಡಿಯುತ್ತಿದ್ದರು. ಬಂಬ್ರಾಣ ಸ್ವಾಗತ್ ಫ್ರೆಂಡ್ಸ್ ನ ಮಾಜಿ ಕಾರ್ಯದರ್ಶಿಯಾಗಿದ್ದರು.

ಅಲ್ಲದೆ ಬಿಜೆಪಿ ಯುವಮೋರ್ಚಾ ಕುಂಬಳೆ ಮಂಡಲ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದರು

By admin

Leave a Reply

Your email address will not be published. Required fields are marked *

error: Content is protected !!