ಬೆಂಗಳೂರಿನಲ್ಲಿ ಸೆರೆ ಸಿಕ್ಕಿರುವ ಐವರು ಶಂಕಿತ ಉಗ್ರರು ಕರ್ನಾಟಕದಲ್ಲಿ ಸುಮಾರು 10 ಹೆಚ್ಚು ಕಡೆ ಭಾರೀ ಬಾಂಬ್‌ ಸ್ಫೋಟ ನಡೆಸುವ ಮೂಲಕ ದೊಡ್ಡ ರಕ್ತಪಾತ ನಡೆಸುವುದಕ್ಕೆ ಸಂಚು ರೂಪಿಸಿದ್ದರು ಎನ್ನುವ ಆತಂಕಕಾರಿ ಮಾಹಿತಿ ಬೆಳಕಿಗೆ ಬಂದಿದೆ.

ಬೆಂಗಳೂರಿನ ಆರ್‌ಟಿ ನಗರದ ಸೈಯದ್ ಸುಹೇಲ್, ಉಮರ್, ಜನಿದ್, ಮುದಾಸಿರ್ ಮತ್ತು ಜಾಹಿದ್ ಎಂಬವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ.

ಸುಮಾರು ಹತ್ತಕ್ಕೂ ಹೆಚ್ಚು ಜನರಿಂದ ಬೃಹತ್ ಸ್ಫೋಟಕ ಪ್ಲಾನ್ ಮಾಡಲಾಗುತ್ತಿದೆ ಎಂಬ ಮಾಹಿತಿ ಬೆಂಗಳೂರಿನ ಸಿಸಿಬಿ ಪೊಲೀಸರಿಗೆ ಸಿಕ್ಕಿತ್ತು. ತಕ್ಷಣ ಎಚೆತ್ತುಕೊಂಡ ಪೊಲೀಸರು ಶಂಕಿತರ ಲೊಕೇಶನ್ ಟ್ರೇಸ್ ಮಾಡಿ ಐವರನ್ನ ವಶಕ್ಕೆ ಪಡೆದುಕೊಂಡಿದ್ದಾರೆ.

ಆ ಮೂಲಕ ದೊಡ್ಡ ವಿಧ್ವಂಸಕ ಕೃತ್ಯವನ್ನು ತಪ್ಪಿಸಿರುವ ಪೊಲೀಸರು ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿರುವುದಾಗಿ ವರದಿಯಾಗಿದೆ.

By admin

Leave a Reply

Your email address will not be published. Required fields are marked *

error: Content is protected !!