ಹಿಂದೂ ಸಮಾಜದ ಮೇಲೆ ನಿರಂತರ ದಾಳಿ ಆಗುತ್ತದೆ, ಹಿಂದುಗಳ ಮೇಲೆ ಅನ್ಯಾಯವಾದರೆ ಅದು ಅಪರಾಧ ಅಲ್ಲ ಅಂತ ಸಮಾಜ ಪರಿಗಣಿಸುತ್ತದೆ ಎಂದು ಸಾಮಾಜಿಕ ಕಾರ್ಯಕರ್ತೆ ರಶ್ಮಿ ಸಾಮಂತ್ ಹೇಳಿದ್ದಾರೆ.
ಉಡುಪಿಯಲ್ಲಿ ಕಾಲೇಜಿನ ಶೌಚಲಯದಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣ ಘಟನೆಯನ್ನು ಖಂಡಿಸಿ ಹಾಗೂ ಸಮಗ್ರ ತನಿಖೆಗೆ ಆಗ್ರಹಿಸಿ ಅವರು ಮಾತನಾಡಿದರು. ಉಡುಪಿ ಕಾಲೇಜಿನಲ್ಲಿ ನಡೆದ ಘಟನೆ ಅಪರಾಧ ಅಂತ ಯಾರೂ ಪರಿಗಣಿಸಿಲ್ಲ, ಉಡುಪಿ ಜಿಲ್ಲೆಗೆ ನಾಚಿಕೆಗೇಡಿನ ಸಂಗತಿಯಾಗಿದೆ. ಯುವತಿಯರ ಮರ್ಯಾದೆ ಒಮ್ಮೆ ಕಳೆದುಕೊಂಡರೆ ಮತ್ತೆ ವಾಪಾಸ ಪಡೆಯಲು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.