ಸನಾತನ ಹಿಂದೂ ಸಂಸ್ಕೃತಿ ನಾಶ ಮಾಡಲು ರಾಕ್ಷಸಿಯರು ಬಂದಿದ್ದರು. ಆದರೆ ಇಂದು ಜಿಹಾದಿ ರಾಕ್ಷಸಿಯರ ಮೂಲಕ ಹಿಂದೂ ಹೆಣ್ಮಕ್ಕಳ ಮಾನ ತೆಗೆಯಲು ಬಂದಿದ್ದಾರೆ. ಜಿಹಾದಿ ರಾಕ್ಷಸಿಯರಿಗೆ ಹಿಂದು ರಕ್ಷಕರಾಗಿ ಉತ್ತರ ಕೊಡುತ್ತೇವೆ. ಅನ್ಯಾಯವಾದಾಗ ತಲವಾರು, ಕತ್ತಿ ಹಿಡಿಯಲು ರೆಡಿಯಾಗಿ ಎಂದು ಉಡುಪಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ವಿವಾದ ಬಾಂಬ್ ಸಿಡಿಸಿದ್ದಾರೆ.
ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಹಿಂದೂ ಸಮಾಜದ ಮೇಲಿನ ಇಂತಹ ದಾಳಿ ಇಂದಿಗೇ ಕೊನೆಯಾಗಬೇಕು. ಹಿಂದೂ ತಾಯಂದಿರು ಎಚ್ಚರ ಆಗಬೇಕು. ಸೌಟು ಪೊರಕೆ ಹಿಡಿಯುವ ಕೈಯ್ಯಲ್ಲಿ ಶಸ್ತ್ರಾಸ್ತ್ರ ಹಿಡಿಯಿರಿ. ನಮ್ಮ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂಬ ಎಚ್ಚರಿಕೆ ಕೊಡಬೇಕಾಗಿದೆ. ಹಿಂದು ಯುವತಿಯರು, ಶ್ರದ್ಧಾಕೇಂದ್ರಗಳನ್ನು ಮುಸಲ್ಮಾನರು ಟಾರ್ಗೆಟ್ ಮಾಡಿದ್ದಾರೆ. ಬ್ಲ್ಯಾಕ್ ಮೇಲ್ ಮಾಡಲು, ಮತಾಂತರಕ್ಕಾಗಿ ವೀಡಿಯೋ ಬಳಸುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.