ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟುವುದು ಪ್ರತಿಯೊಬ್ಬರ ಜವಾಬ್ದಾರಿ – ಎಂದು ವಿಟ್ಲ ಪೊಲೀಸ್ ಠಾಣೆಯ ಎಸ್ ಐ ವಿದ್ಯಾ ಜೆ ಕೆ ಹೇಳಿದರು.
ಅವರು ಸರಕಾರಿ ಪ್ರೌಢಶಾಲೆ ಮಾಣಿಲದಲ್ಲಿ ದಿನಾಂಕ 05.08.2023 ರಂದು ಪೋಕ್ಸೋ ಕಾಯ್ದೆ ಬಗ್ಗೆ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಮಾಹಿತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡುತ್ತಾ ಹೇಳಿದರು.

ಸಮಾಜದಲ್ಲಿ ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ಉದಾಹರಿಸುತ್ತಾ ಇಂತಹ ಅಮಾನವೀಯ ಕೃತ್ಯಗಳನ್ನು ತಡೆಗಟ್ಟುವಲ್ಲಿ ಸಮಾಜದ ಪ್ರತಿಯೊಬ್ಬರೂ ಸಹಕರಿಸಬೇಕಾದ ಅನಿವಾರ್ಯತೆಯನ್ನು ಒತ್ತಿ ಹೇಳಿದರು.
ವಿದ್ಯಾರ್ಥಿಗಳು ಹಾಗೂ ಪೋಷಕರೊಂದಿಗೆ ಸಂವಾದದಲ್ಲಿ ಇವರು ಪೊಲೀಸ್ ನೇಮಕಾತಿ, ತರಬೇತಿ ಬಗ್ಗೆ ಹಾಗೂ ಸಮಾಜ ವಿರೋಧೀ ಕೃತ್ಯಗಳನ್ನು ತಡೆಯಲು ಇರುವ ವಿವಿಧ ಕಾನೂನುಗಳ ಬಗ್ಗೆಯೂ ಸವಿವರ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಎಸ್. ಡಿ. ಎಂ .ಸಿ ಅಧ್ಯಕ್ಷರಾದ ಶಿವಪ್ರಸಾದ್ ಸೊರಂಪಳ್ಳ, ಹಿರಿಯರಾದ ಮುರುವ ನಡುಮನೆ ಮಹಾಬಲ ಭಟ್ ಹಾಗೂ ಮುಖ್ಯ ಶಿಕ್ಷಕರಾದ ಭುವನೇಶ್ವರ್ ಸಿ, ದೈಹಿಕ ಶಿಕ್ಷಣ ಶಿಕ್ಷಕರಾದ ಉಮಾನಾಥ ರೈ ಮೇರಾವು , ಹಿರಿಯ ಶಿಕ್ಷಕಿ ಲತಾ ಯು ಉಪಸ್ಥಿತರಿದ್ದರು.
ಪೋಷಕ ಹಾಗೂ ಶಿಕ್ಷಕ ವೃಂದ ಹಾಗೂ ಶಾಲಾ ಮಕ್ಕಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಶಿಕ್ಷಕ ಸುಧೀಶ್ ಕೆ ಕಾರ್ಯಕ್ರಮ ನಿರೂಪಿಸಿದರು.

By admin

Leave a Reply

Your email address will not be published. Required fields are marked *

error: Content is protected !!