ಮಂಗಳೂರು:  ಮಂಗಳೂರಿನ ಹೃದಯ ಭಾಗದ ಸೆಂಟ್ರಲ್ ಮಾರ್ಕೆಟ್ ಬಳಿ ಕಾರ್ಯಾಚರಿಸುತ್ತಿರುವ ದುಬೈ ಮಾರ್ಕೆಟ್‌ನಲ್ಲಿ ಮೊಬೈಲ್ ರಿಪೇರಿ ವಿಚಾರದಲ್ಲಿ ಅಂಗಡಿ ಮಾಲಕನಿಗೆ ಗುಂಪೊಂದು ಥಳಿಸಿ ಪರಾರಿಯಾಗಿರುವ ಘಟನೆ ನಡೆದಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಮಂಗಳವಾರದಂದು ರಾತ್ರಿ ಗ್ರಾಹಕನೋರ್ವ ಪವರ್ ಬ್ಯಾಂಕ್‌ ರಿಪೇರಿಗೆಂದು ಬಂದಿದ್ದು, ರಿಪೇರಿ ಮಾಡಲು ಸೂಚಿಸಿದ್ದ.

ಅಂಗಡಿ ಮಾಲಕ ನಾವು ಮೊಬೈಲ್ ಹೊರತು ಬೇರೆ ಯಾವುದನ್ನೂ ರಿಪೇರಿ ಮಾಡುವುದಿಲ್ಲ ಎಂದಿದ್ದು ಈ ವೇಳೆ ಆತ ಸ್ಕ್ರೂ ಡ್ರೈವರ್ ಕೊಡು, ನಾನೇ ಸರಿ ಮಾಡುತ್ತೇನೆ ಎಂದಿದ್ದ.

ನಾವು ಬ್ಯುಸಿ ಇದ್ದೇವೆ ಎಂದಿದಕ್ಕೆ ಮಾತಿಗೆ ಮಾತು ಬೆಳೆದಿದೆ. ಈ ವೇಳೆ ಕೋಪಗೊಂಡ ಗ್ರಾಹಕ ಅಂಗಡಿ ಮಾಲಕನಿಗೆ ಹಲ್ಲೆ ಮಾಡಿದ್ದ.

ಇದಕ್ಕೆ ಪ್ರತಿರೋಧ ವ್ಯಕ್ತ ಪಡಿಸಿದಕ್ಕೆ ಕೋಪಗೊಂಡ ಗ್ರಾಹಕ ತನ್ನ ಗೆಳೆಯರ ಗುಂಪನ್ನು ಕರೆದು ಮಾಲಕನಿಗೆ ಆತನಿಗೆ ಥಳಿಸಿದ್ದಾನೆ. ಹಲ್ಲೆ ಮಾಡಿದ ವೀಡಿಯೋ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸ್ಥಳೀಯ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಬಂಧಿಸಲಾಗಿದ್ದು, ಉಳಿದವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

By admin

Leave a Reply

Your email address will not be published. Required fields are marked *

error: Content is protected !!