ಪ್ರತಿಭೆಯನ್ನು ಬಳಸಿಕೊಳ್ಳುವುದರಲ್ಲಿ ಯಶಸ್ಸು ಅಡಗಿದೆ – ಎಂದು ಖ್ಯಾತ ನಿರೂಪಕ , ಹಿನ್ನೆಲೆ ಧ್ವನಿ ಕಲಾವಿದ, ನಟ ಬಡೆಕ್ಕಿಲ ಪ್ರದೀಪ್ ಹೇಳಿದರು.
ಇವರು ದಿನಾಂಕ 15.08 . 2023 ರಂದು ಸರಕಾರಿ ಪ್ರೌಢ ಶಾಲೆ ಮಾಣಿಲದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಹಾಗೂ 10ನೇ ತರಗತಿ ವಿದ್ಯಾರ್ಥಿಗಳ ಅಭಿನಂದನಾ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುತ್ತಾ ಸ್ವಾತಂತ್ರ್ಯೋತ್ತರ ಭಾರತದ ಸಾಧನೆಗಳು , ವ್ಯಕ್ತಿತ್ವ ನಿರ್ಮಾಣ ಹೀಗೆ ವಿವಿಧ ವಿಚಾರಗಳ ಬಗ್ಗೆ ಮಾತನಾಡಿದರು.
ಬೆಳಿಗ್ಗೆ ನಡೆದ ರಾಷ್ಟ್ರಧ್ವಜಾರೋಹಣವನ್ನು ಎಸ್ ಡಿ ಎಂ ಸಿ ಅಧ್ಯಕ್ಷ ಶಿವಪ್ರಸಾದ್ ಸೊರಂಪಳ್ಳ ನಡೆಸಿ ಶುಭ ಹಾರೈಸಿದರು.

2022- 23ನೇ ಸಾಲಿನಲ್ಲಿ ಅತ್ಯುತ್ತಮ ಶ್ರೇಣಿ ಗಳಿಸಿದ ಹಾಗೂ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೆ ಸ್ಮರಣಿಕೆ ಹಾಗೂ ನಗದು ಬಹುಮಾನ ನೀಡಿ ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ಕನ್ನಡ ಭಾಷಾ ವಿಷಯದಲ್ಲಿ ಪೂರ್ಣ ಅಂಕ ಪಡೆದ 6 ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.
ಕಾರ್ಯಕ್ರಮವನ್ನು ಉದ್ದೇಶಿಸಿ ಗ್ರಾ ಪಂ ಉಪಾಧ್ಯಕ್ಷ ರಾಜೇಶ್ ಕುಮಾರ್ ಬಾಳೆಕಲ್ಲು, ಸ್ಥಳದಾನಿಗಳೂ ಹಿರಿಯರೂ ಆದ ನಡುಮನೆ ಮಹಾಬಲ ಭಟ್, ಗ್ರಾ ಪಂ ಸದಸ್ಯ ಶೀಧರ್ ಬಾಳೆಕಲ್ಲು ಮಾತನಾಡಿ ಸ್ವಾತಂತ್ರ್ಯೋತ್ಸವ ದ ಸಂದೇಶ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷ ಶಿವಪ್ರಸಾದ್ ಸೊರಂಪಳ್ಳ ವಹಿಸಿದ್ದರು. ಕಾರ್ಯಕ್ರಮದಲ್ಲಿ ಗ್ರಾ ಪಂ ಅಧ್ಯಕ್ಷೆ ವನಿತಾ, ನಿವೃತ್ತ ಮುಖ್ಯ ಗುರುಗಳಾದ ಸುಬ್ರಹ್ಮಣ್ಯ ಭಟ್ ಕೆ.ಜಿ , ಅನಂತ ಭಟ್, , ಗ್ರಾ.ಪಂ ಸದಸ್ಯ ವಿಷ್ಣು ಕೊಮ್ಮುಂಜೆ, ಎಸ್ ಡಿ ಎಂ ಸಿ ಸದಸ್ಯ ವಿಷ್ಣು ಕನ್ನಡಗುಳಿ, ಹಿರಿಯ ಶಿಕ್ಷಕಿ ಲತಾ ಯು ಭಾಗವಹಿಸಿದ್ದರು ಮುಖ್ಯ ಶಿಕ್ಷಕ ಭುವನೇಶ್ವರ್ ಸಿ ಎಲ್ಲರನ್ನೂ ಸ್ವಾಗತಿಸಿದರು. ಶಿಕ್ಷಕ ಸುಧೀಶ್ ಕೆ ಕಾರ್ಯಕ್ರಮ ನಿರೂಪಿಸಿದರು. ದೈ ಶಿ ಶಿಕ್ಷಕ ಉಮಾನಾಥ ರೈ ಮೇರಾವು ವಂದಿಸಿದರು.
ಊರಿನ ಪ್ರಮುಖರು, ಪೋಷಕರು, ಶಿಕ್ಷಕ ಹಾಗೂ ವಿದ್ಯಾರ್ಥಿ ವೃಂದ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

By admin

Leave a Reply

Your email address will not be published. Required fields are marked *

error: Content is protected !!