ಪುತ್ರನ ಸಾವಿನ ಬಳಿಕ ನೊಂದುಕೊಂಡುದ್ದ ತಂದೆಯೊಬ್ಬರು ಸಾವಿಗೆ ಕೊರಳೊಡ್ಡಿರುವ ಘಟನೆ ಕುಂಬಳೆ ಬಳಿಯ ಬಂಬ್ರಾಣ ಕಲ್ಕುಲ ಎಂಬಲ್ಲಿ ವರದಿಯಾಗಿದೆ. ಕುಂಬಳೆ ಬಳಿಯ ಬಂಬ್ರಾಣ ಕಲ್ಕುಲ ನಿವಾಸಿ ಕಲ್ಲಿನ ಮೇಸ್ತ್ರಿ ಕೆಲಸ ಮಾಡುತ್ತಿದ್ದ ಲೋಕೇಶ್ (52) ಮೃತರು.

ಲೋಕೇಶ್ ಮೃತದೇಹ ನಿನ್ನೆ ಬೆಳಿಗ್ಗೆ ಉಳ್ಳಾಲ ಕಡಲ ಕಿನಾರೆಯಲ್ಲಿ ಪತ್ತೆಯಾಗಿದೆ. ಇವರ ಪುತ್ರ ರಾಜೇಶ್(26) ಕಳೆದ ಜುಲೈ ತಿಂಗಳ 10 ರಂದು ನಾಪತ್ತೆಯಾಗಿದ್ದರು. ಬಳಿಕ ಜು.12 ರಂದು ಬೆಳಗ್ಗೆ ರಾಜೇಶ್ ನ ಮೃತದೇಹ ತೊಕ್ಕೊಟ್ಟು ಬಳಿಯ ಬೆಂಗರೆ ನೇತ್ರಾವತಿ ನದಿ ತೀರದಲ್ಲಿ ಪತ್ತೆಯಾಗಿತ್ತು.

ಮಗನ ಅಂತ್ಯಕ್ರಿಯೆ ಕಳೆದ ಬಳಿಕ ತಂದೆ ಲೋಕೇಶ್ ನೊಂದುಕೊಂಡಿದ್ದರು. ಅಲ್ಲದೆ ಮಗನ ಸಾವಿನ ಬಳಿಕ ಮಾನಸಿಕವಾಗಿ, ಕುಗ್ಗಿ ಹೋಗಿದ್ದರು. ಎಂದು ಪರಿಸರ ನಿವಾಸಿಗಳು ತಿಳಿಸಿದ್ದಾರೆ. ನಿನ್ನೆ ಬೆಳಗ್ಗೆ 9.00 ಗಂಟೆಯ ವೇಳೆ ಪರಿಸರದ ಕೆಲವು ಮಂದಿಗೆ ಲೋಕೇಶ್ ರವರು ಮೊಬೈಲ್ನಲ್ಲಿ ವಾಟ್ಸಪ್ ಸಂದೇಶ ಕಳುಹಿಸಿ “ನಾನು ಈಗ ಸೋಮೇಶ್ವರಕ್ಕೆ ಹೋಗಿ ಸಮುದ್ರಕ್ಕೆ ಹಾರುತ್ತೇನೆ. ನನ್ನ ಹೆಣ ಉಳ್ಳಾಲದಲ್ಲಿ ಸಿಗಬಹುದು” ನಾನು ಮೊಬೈಲ್ ಕೊಂಡು ಹೋಗುವುದಿಲ್ಲ ಮನೆಯಲ್ಲಿ ಇಟ್ಟು ಹೋಗ್ತೇನೆ ಎಂದು ಹೇಳಿ ಮನೆಯಿಂದ ತೆರಳಿದ್ದರು. ವಾಟ್ಸಪ್ ಸಂದೇಶ ಕೇಳಿದ ಕೂಡಲೇ ಪರಿಸರದವರು ಕಾಲ್ ಕರೆ ಮಾಡಿದಾಗ ಮನೆ ಮಂದಿ ಕಾಲ್ ರಿಸೀವ್ ಮಾಡಿದ್ದರು. ಆಗ ಮನೆ ಮಂದಿ ಲೋಕೇಶ್ ರವರು ಮೊಬೈಲ್ ಮನೆಯಲ್ಲಿ ಇಟ್ಟು ಹೊರ ಹೋದ ಬಗ್ಗೆ ಮಾಹಿತಿ ನೀಡಿದ್ದರು.

ಕೂಡಲೇ ಈ ವಿಷಯವನ್ನು ಉಳ್ಳಾಲ ಠಾಣೆಗೆ ಮನೆಯವರು ಹಾಗೂ ಪರಿಸರ ನಿವಾಸಿಗಳು ತಿಳಿಸಿದ್ದು, 11.00 ಗಂಟೆ ವೇಳೆ ಲೋಕೇಶ್ ರ ಮೃತದೇಹ ಉಳ್ಳಾಲದಲ್ಲಿ ಮೀನುಗಾರರಿಗೆ ಸಿಕ್ಕಿದೆ. ಬಳಿಕ ಮೃತದೇಹವನ್ನು ಉಳ್ಳಾಲ ಪೊಲೀಸರು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಮರಣೋತ್ತರ ಪರೀಕ್ಷೆ ನಡೆಸಿ, ಇಂದು ಬೆಳಗ್ಗೆ ಮನೆಯವರಿಗೆ ಬಿಟ್ಟು ಕೊಟ್ಟರು. ಬಳಿಕ ಮನೆಯವರು ಮೃತ ದೇಹವನ್ನು ಲೋಕೇಶ್ ರ ಸಹೋದರ ಸುಧಾಕರರ ಮನೆ ತೊಕ್ಕೊಟ್ ಬಳಿಯ ಮಂಚಿಲ ಎಂಬಲ್ಲಿಗೆ ತಂದು ಅಂತಿಮ ವಿಧಿವಿಧಾನ ನಡೆಸಿ, ಬಳಿಕ ಮೃತದೇಹವನ್ನು ಚೆಂಬುಗುಡ್ಡೆ ಸ್ಮಶಾನದಲ್ಲಿ ಅಪರಾಹ್ನ ಸಂಸ್ಕರಿಸಲಾಯಿತು. ಲೋಕೇಶ್ ರವರು ಮೂಲತಃ ತೊಕ್ಕೊಟ್ಟು ನಿವಾಸಿಯಾಗಿದ್ದು, ಕಳೆದ 25 ವರ್ಷದಿಂದ ಕುಂಬಳೆ ಬಳಿಯ ಬಂಬ್ರಾಣ ಕಲ್ಕುಳದಲ್ಲಿ ಮೇಸ್ತ್ರಿ ಕೆಲಸ ಮಾಡುತ್ತಾ ಪತ್ನಿ, ಮಕ್ಕಳ ಜೊತೆ ವಾಸಿಸುತ್ತಿದ್ದರು. ದಿ. ಗೋಪಾಲ, ದಿ. ಲಕ್ಷ್ಮಿ ದಂಪತಿಯ ಪುತ್ರನಾಗಿರುವ ಲೋಕೇಶ್ ಪತ್ನಿ ಪ್ರಭಾವತಿ, ಪುತ್ರ ಶುಭಂ ಸಹೋದರ ಸಹೋದರಿಯರಾದ ರಾಮ, ಸುಧಾಕರ, ಸರೋಜಿನಿ, ಜಯಂತಿ ಹಾಗೂ ಅಪಾರ ಬಂಧು ಮಿತ್ರರನ್ನು ಆಗಲಿದ್ದಾರೆ. ರಾಜೇಶ್ ರವರ ಸಾವಿನ ಬಳಿಕ ಕೇವಲ 33 ದಿನದಲ್ಲಿ ತಂದೆ ಲೋಕೇಶ್ ರ ಸಾವು ಇದೀಗ ಮನೆಯವರಿಗೆ ಹಾಗೂ ಪರಿಸರ ಪ್ರದೇಶದಲ್ಲಿ ಶೋಕಸಾಗರ ವನ್ನುಂಟುಮಾಡಿದೆ. ಪ್ರಕರಣ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

By admin

Leave a Reply

Your email address will not be published. Required fields are marked *

error: Content is protected !!