ಸಂಚಾರವನ್ನು ಮತ್ತಷ್ಟು ವ್ಯವಸ್ಥಿತಗೊಳಿಸುವ ಸಲುವಾಗಿ ಇನ್ನೂ ಕೆಲವು ಕಡೆ ಟ್ರಾಫಿಕ್ ಸಿಗ್ನಲ್ಗಳನ್ನು ಅಳವಡಿಸಲು ಉದ್ದೇಶಿಸಲಾಗಿದೆ. ಅಲ್ಲದೆ ಸಂಚಾರ ನಿಯಮ ಉಲ್ಲಂಘನೆ ಪತ್ತೆಗೆ ಅತ್ಯಾಧುನಿಕ ತಂತ್ರಜ್ಞಾನದ ಕ್ಯಾಮರಾಗಳನ್ನು ಅಳವಡಿಸಲು ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ದಿನೇಶ್ ಕುಮಾರ್ ಬಿ.ಪಿ. ಹೇಳಿದ್ದಾರೆ.
ಮಂಗಳೂರು ನಗರ ಸಂಚಾರ ಪೊಲೀಸ್ ವತಿಯಿಂದ ನಗರದ ಟಿಎಂಎ ಪೈ ಕನ್ವೆನ್ಸನ್ ಸಭಾಂಗಣದಲ್ಲಿ
ಶನಿವಾರ ನಡೆದ ‘ಸಂಚಾರ ಸಂಪರ್ಕ ದಿವಸ’
ಕಾರ್ಯಕ್ರಮದಲ್ಲಿ ಸಾರ್ವಜನಿಕರ ಪ್ರಶ್ನೆಗಳಿಗೆ ಅವರು ಪ್ರತಿಕ್ರಿಯಿಸಿದರು.