ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಿದ ಸಂದರ್ಭದಲ್ಲಿ ರಾಜ್ಯಾಧ್ಯಕ್ಷನಳಿನ್ ಕುಮಾರ್ ಕಟೀಲ್ ಅವರನ್ನು ಕಡೆಗಣಿಸಲಾಯಿತೇ ಎನ್ನುವ ಪ್ರಶ್ನೆಯೊಂದು ಕಾಡಲಾರಂಬಿಸಿದೆ. ಇದಕ್ಕೆ ಪೂರಕವಾಗಿ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ನಡೆಸುತ್ತಿದ್ದಾಗ ಪ್ರಮುಖ ನಾಯಕರು ಅವರನ್ನು ಹಿಂಬಾಲಿಸಿಕೊಂಡು ಹೋಗುವುದು ವಾಡಿಕೆ. ಆದರೆ, ರಾಜ್ಯದಲ್ಲಿ ಬಿಜೆಪಿಯ ಪ್ರಮುಖ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರಧಾನ ಮಂತ್ರಿಯವರ ಜೊತೆಗೆ ಇರದೆ ಜನಸಾಮಾನ್ಯರು ರಸ್ತೆ ಬದಿನಿಂತು ಕೈಬೀಸುವಂತೆ ನಳಿನ್ ಕುಮಾರ್ ಕಟೀಲ್, ಮಾಜಿ ಸಚಿವ ಆರ್ ಅಶೋಕ್ ಮೊದಲಾದ ಪ್ರಮುಖ ನಾಯಕರು ಬ್ಯಾರಿಕೇಡ್ ಹಿಂದೆ ನಿಂತು ಕೈಬೀಸುವ ಫೋಟೋ ವೈರಲ್ ಆಗುತ್ತಿದೆ. ಇದರ ಪರ ವಿರೋಧ ಚರ್ಚೆಯಾಗುತ್ತಿದೆ.

By admin

Leave a Reply

Your email address will not be published. Required fields are marked *

error: Content is protected !!