ನಾವು ಸೆ.19 ರಂದು ಮಂಗಳೂರು ವಿವಿಯಲ್ಲಿ ಗಣೇಶನ ಪ್ರತಿಷ್ಟಾಪನೆ ಮಾಡಿಯೇ ಮಾಡ್ತೇವೆ. ಅದನ್ನು ಯಾರು ಬೇಡ ಅಂದರೂ ವಿವಿಯ ಮಂಗಳಾ ಆಡಿಟೋರಿಯಂನಲ್ಲೇ ಗಣೇಶೋತ್ಸವ ಆಗುತ್ತೆ ಎಂದು ಕಲ್ಲಡ್ಕ ಪ್ರಭಾಕರ ಭಟ್ ಸವಾಲು ಹಾಕಿದ್ದಾರೆ.
ಮಂಗಳೂರು ವಿವಿ ಉಪಕುಲಪತಿ ನಡೆ ಖಂಡಿಸಿ ಮಂಗಳೂರಿನ ಅಸೈಗೋಳಿಯಲ್ಲಿ ಭಜನೆ ಮೂಲಕ ಪ್ರತಿಭಟನೆ ನಡೆಸಿ ಮಾತನಾಡಿದರು.
ಮಂಗಳೂರು ವಿವಿಯಲ್ಲಿ ಹಲವಾರು ವರ್ಷಗಳಿಂದ ಯಾವುದೇ ತಕರಾರು ಇಲ್ಲದೆ ಗಣೇಶೋತ್ಸವ ನಡೆಯುತ್ತಾ ಬಂದಿದೆ. ನೂತನವಿವಾಗಿ ಅಧಿಕಾರ ವಹಿಸಿಕೊಂಡ ಕುಲಪತಿಗಳು ಈ ವರ್ಷ ಹಠಾತ್ ಆಗಿ ಉತ್ಸವವನ್ನು ರದ್ದು ಮಾಡಲು ಹೊರಟಿದ್ದಾರೆ. . ಕಲ್ಲಡ್ಕ ಪ್ರಭಾಕರ ಭಟ್ ಸೇರಿ BJP, ABVP ಸೇರಿದಂತೆ ಸಂಘಪರಿವಾರದ ಹಲವು ಸಂಘಟನೆಗಳ ಪ್ರಮುಖರು ಉಪಸ್ಥಿತರಿದ್ದರು….