ಪುತ್ತೂರು, ಮಾಜಿ ಶಾಸಕನ ಅರೆನಗ್ನ ಫೋಟೊ ವೈರಲ್ ಬೆನ್ನಲ್ಲೇ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಬಿಜೆಪಿ ಕಾರ್ಯಕರ್ತನೋರ್ವನ ಮಹಿಳೆಯೊಂದಿಗಿನ ಅರೆನಗ್ನ ಫೋಟೊ ವೈರಲ್ ಆಗುತ್ತಿದೆ. ಆದರೆ, ಆ ವ್ಯಕ್ತಿ ವೈರಲ್ ಆಗುತ್ತಿರುವ ತನ್ನ ಫೋಟೋ ಎಡಿಟ್ ಮಾಡಲಾಗಿದೆ ಎಂದು ಸೆನ್ ಠಾಣೆ ಮೆಟ್ಟಿಲೇರಿದ್ದಾರೆ.
ಬಿಜೆಪಿ ಕಾರ್ಯಕರ್ತ ನವೀನ್ ರೈ ಕೈಕಾರ ಮಹಿಳೆಯೊಂದಿಗಿರೋ ಫೋಟೋ ವೈರಲ್ ಆಗಿದೆ. ಮಹಿಳೆಯೊಂದಿಗೆ ರೂಂ ಒಂದರಲ್ಲಿ ಸೆಲ್ಫೀ ಫೋಟೊ ವೈರಲ್ ಆಗುತ್ತಿದೆ.
ಇವರು, ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಮತ್ತು ಬೆಂಗಳೂರಿನ ಉದ್ಯಮಿ ಗುಣರಂಜನ್ ಶೆಟ್ಟಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ.
ನವೀನ್ ರೈ ಕೈಕಾರ ಫೋಟೋ ವೈರಲ್ ಬೆನ್ನಲ್ಲೇ ಸೆನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ತನ್ನ ಫೋಟೋವನ್ನ ಬೇರೆ ಯುವತಿಯೊಬ್ಬಳ ಜತೆ ಇರುವಂತೆ ಎಡಿಟ್ ಮಾಡಿ ವೈರಲ್ ಎಂದು ದೂರು ನೀಡಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿ ಮಾನಹಾನಿ ಮಾಡಿರುವುದಾಗಿ ಆರೋಪಿಸಿದ್ದಾರೆ. ಒಳಮೊಗ್ರು ಗ್ರಾಮದ ಕೈಕಾರ ಸಮೀಪದ ಪನಡ್ಕ ನಿವಾಸಿ ನವೀನ್ ರೈ ದೂರು ನೀಡಿದ್ದಾರೆ.
ಫೋಟೋವನ್ನು ದಿನೇಶ್ ಪುತ್ತೂರು ಎಂಬವರು ಪುತ್ತಿಲ ಪರಿವಾರ -1ಎಂಬ ವಾಟ್ಸಾಪ್ ಗ್ರೂಪಿನಲ್ಲಿ ವೈರಲ್ ಮಾಡಿರುವುದಾಗಿ ದೂರು ನೀಡಿದ್ದಾರೆ.
ಮಾನಹಾನಿ ಮಾಡಿರುವುದಾಗಿ ದೂರಿನಲ್ಲಿ ಆರೋಪ ಮಾಡಲಾಗಿದೆ.