ಕಳೆಂಜ ಅಮ್ಮಿನಡ್ಕದ ಮೀಸಲು ಅರಣ್ಯ ಪ್ರದೇಶದ ಜಾಗದಲ್ಲಿ ಮನೆಯ ಫೌಂಡೇಷನ್ ಕಿತ್ತೆಸೆದ ಪ್ರಕರಣದಲ್ಲಿ ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ಜಯಪ್ರಕಾಶ್ ಕೆ.ಕೆ. ಅವರನ್ನು ಶಾಸಕ ಹರೀಶ್ ಪೂಂಜ ಏಕವಚನದಲ್ಲಿ ಮತ್ತು ಅವಾಚ್ಯವಾಗಿ ನಿಂದಿಸಿದ್ದಾರೆ ಎಂದು ಆರೋಪಿಸಿ, ಈಗಾಗಲೇ ದೂರು ದಾಖಲಾಗಿದೆ. ಅನ್ಯಾಯ ತಡೆಯಲು ಹೋದ ಶಾಸಕರ ವಿರುದ್ಧ ದೂರು ದಾಖಲಾಗಿರುವುದು ಅಸಮಾಧಾನಕ್ಕೆ ಕಾರಣವಾಗಿದೆ.
ಕಳೆಂಜ ಅಮ್ಮಿನಡ್ಕದ ಮೀಸಲು ಅರಣ್ಯ ಪ್ರದೇಶದ ಜಾಗದಲ್ಲಿ ಮನೆಯ ಫೌಂಡೇಷನ್ ಕಿತ್ತೆಸೆದ ಪ್ರಕರಣದಲ್ಲಿ ಬಳಿಕ ಮರು ಮನೆ ನಿರ್ಮಾಣ ಮಾಡಿದ ಪ್ರಕರಣ ಸಂಬಂಧ ಅ.೯ರಂದು ಉಪ್ಪಿನಂಗಡಿ ಅರಣ್ಯಾಧಿಕಾರಿಗಳ ತಂಡ ತೆರವು ಮಾಡಲು ಮುಂದಾದಾಗ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಉಪ್ಪಿನಂಗಡಿ ಅರಣ್ಯಾಧಿಕಾರಿ ಜಯಪ್ರಕಾಶ್ ಕೆ.ಕೆ.ರವರ ವಿರುದ್ಧ ಅಸಮಾಧಾನ ಹೊರಹಾಕಿದ್ದರು.