ಹಾವು ಕಡಿತಕ್ಕೆ ಒಳಗಾಗಿ ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಸಂಭವಿಸಿದ ಅಪಘಾತ ದಲ್ಲಿ ವ್ಯಕ್ತಿಯೋ ರ್ವ ರು ಮೃತಪಟ್ಟ ಘಟನೆ ಆದೂರು ಸಮೀಪದ ಕೊಟ್ಟೂರು ನೆಕ್ರಂಪಾರೆ ಯಲ್ಲಿ ರವಿವಾರ ರಾತ್ರಿ ನಡೆದಿದೆ.

ಬೆಳ್ಳೂರು ಅದ್ವಾಲದ ಕೃಷ್ಣ (50) ಮೃತ ಪಟ್ಟವರು. ರಾತ್ರಿ ಕೃಷ್ಣ ಅವರಿಗೆ ಮನೆ ಸಮೀಪ ಹಾವು ಕಚ್ಚಿದ್ದು, ಇದರಿಂದ ಸಂಬಂಧಿಕ ಗೋಪಾಲ ರವರು ಬೈಕ್ ನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ನೆಕ್ರಂಪಾರೆಯಲ್ಲಿ ಬೈಕ್ ಕಾರು ನಡುವೆ ಅಪಘಾತ ಸಂಭವಿಸಿದೆ

ಇಬ್ಬರು ರಸ್ತೆಗೆ ಎಸೆಯಲ್ಪಟ್ಟಿದ್ದು, ಇಬ್ಬರನ್ನು ಸ್ಥಳಿಯರು ಆಸ್ಪತ್ರೆಗೆ ಸಾಗಿಸಿದರು ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೃಷ್ಣ ಮೃತಪಟ್ಟಿದ್ದಾರೆ. ಗಂಭೀರ ಗಾಯ ಗೊಂಡ ರಮೇಶ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆದೂರು ಠಾಣಾ ಪೊಲೀಸರು ಪ್ರಕರಣ ದಾಖಲಿಸಲಾಗಿದೆ. ಮೃತ ದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಸಂಬಂಧಿಕರಿಗೆ ನೀಡಲಾಗಿದೆ.

By admin

Leave a Reply

Your email address will not be published. Required fields are marked *

error: Content is protected !!