ಡಿಯೋ ಸ್ಕೂಟಿವೊಂದು ಮರಕ್ಕೆ ಹೊಡೆದ ಪರಿಣಾಮ ಸವಾರ ಗಂಭೀರ ಸ್ವರೂಪದಲ್ಲಿ ಗಾಯಗೊಂಡ ಘಟನೆ ಹೊಸ್ಮಾರು – ನಾರಾವಿ ಹಾದು ಹೋಗಿರುವ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.

ನ. 1ರಂದು ರಾತ್ರಿ 10.30ರ ವೇಳೆಗೆ ಈ ದುರ್ಘಟನೆ ಸಂಭವಿಸಿದೆ.ನಾರಾವಿಯ ಸಂತೋಷ್ ಘಟನೆಯಲ್ಲಿ ಗಾಯಗೊಂಡ ವ್ಯಕ್ತಿ.

ಸಾರ್ವಜನಿಕರು (108)ಅಂಬುಲೆನ್ಸ್‌ ಗೆ ಕರೆ ಮಾಡಿದ ತಕ್ಷಣ ಸ್ಥಳಕ್ಕೆ ಧಾವಿಸಿ ಗಾಯಾಳುವಿಗೆ ಚಿಕಿತ್ಸೆ ನೀಡಲಾಗಿದೆ.ಎಮರ್ಜೆನ್ಸಿ ಮೆಡಿಕಲ್ ಟೆಕ್ನಿಷಿಯನ್ ದೇವಕಿ ಮತ್ತು ಪೈಲೆಟ್ ಕೊಟ್ರಪ್ಪ ಜಿ ಅವರು ರೋಗಿಗೆ ಪ್ರಥಮ ಚಿಕಿತ್ಸೆಯನ್ನು ನೀಡಿದ್ದಾರೆ.

ಹೆಚ್ಚಿನ ಚಿಕಿತ್ಸೆಗಾಗಿ ಕಾರ್ಕಳ ತಾಲೂಕು ಸರಕಾರಿ ಆಸ್ಪತ್ರೆಗೆ ಗಾಯಾಳುವನ್ನು ದಾಖಲಿಸಲಾಗಿತ್ತು. ತೀವ್ರ ರೀತಿಯಲ್ಲಿ ಗಾಯಗೊಂಡಿರುವುದರಿಂದ ಗಾಯಾಳುವನ್ನು ಅಜ್ಜರುಕಾಡು ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

By admin

Leave a Reply

Your email address will not be published. Required fields are marked *

error: Content is protected !!