ಮುಂದಿನ 2024 ರಲ್ಲಿ ನಡೆಯುವ ಲೋಕಸಭಾ ಚುನಾವಣೆಯ ಕಾವು ರಂಗೇರಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ನೇರಾ ಸ್ಪರ್ಧೆ ನಡಯಲಿದೆ.ದಕ್ಷಿಣ ಕನ್ನಡ ಕನ್ನಡ ಜಿಲ್ಲೆಯಲ್ಲಿ ಭಾರತೀಯ ಜನತಾ ಪಾರ್ಟಿ ಯಿಂದ ನಳಿನ್ ಕುಮಾರ್ ಕಟೀಲ್ ಅವರಿಗೆ ಟಿಕೆಟ್ ಲಭಿಸುವ ಸಾಧ್ಯತೆಯಿದೆ.

ಆದರೆ ಕಾಂಗ್ರೆಸ್ ಪಕ್ಷದಿಂದ ಇನ್ನು ಕೂಡ ಆಕಾಂಕ್ಷಿಗಳ ಪಟ್ಟಿಯಾಗಿಲ್ಲ, ಆದರೆ ಸಚಿವರಾದ ಮಧು ಬಂಗಾರಪ್ಪ ಅವರು ಕಳೆದ ತಿಂಗಳು ಕೆಪಿಸಿಸಿ ವೀಕ್ಷಕರಾಗಿ ಜಿಲ್ಲೆಗೆ ಆಗಮಿಸಿ ಲೋಕಸಭಾ ಅಭ್ಯರ್ಥಿಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.

ಪಕ್ಷದ ಉನ್ನತ ವಲಯದಲ್ಲಿ ಲೋಕಸಭಾ ಚುನಾವಣೆಗೆ ರಣತಂತ್ರ ರೂಪಿಸುವ ಜವಾಬ್ದಾರಿಯ ಭಾಗವಾಗಿ ಚುನಾವಣಾ ತಜ್ಞರೊಂದಿಗೆ ಗಂಭೀರ ಮಾತುಕತೆಗಳು ನಡೆದಿದೆ ಎಂದು ವರದಿಯಾಗಿದೆ.

ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಈ ಬಾರಿ ಯುವಕರಿಗೆ ಅವಕಾಶ ನೀಡುವ ಸಾಧ್ಯತೆಯಿದೆ. ಮುಖ್ಯವಾಗಿ ಕಳೆದ 2023 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಭದ್ರಕೋಟೆಯಾಗಿದ್ದ ಚಿಕ್ಕಮಗಳೂರು ಜಿಲ್ಲೆಯಲ್ಲಿ‌ 5 ರಲ್ಲಿ 5 ಸ್ಥಾನದಲ್ಲಿ ಜಯಗಳಿಸಲು ಪ್ರಮುಖ ಪಾತ್ರ ವಹಿಸಿದ್ದ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಕೆಪಿಸಿಸಿ ಸಂಯೋಕರಾಗಿದ್ದ ಮಂಗಳೂರು ಮೂಲದ ವಿವೇಕ್ ರಾಜ್ ಪೂಜಾರಿ ಅವರ ಹೆಸರು ಕೇಳಿಬಂದಿದೆ.

ಸಿ‌‌.ಟಿ ರವಿಯಂತಹ ಬಿಜೆಪಿ ಯ ಘಟಾನುಘಟಿ ನಾಯಕರನ್ನ  ಸೋಲಿಸಲು ರಣತಂತ್ರ ರೂಪಿಸಿ ವಿವೇಕ್ ರಾಜ್ ಪೂಜಾರಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಲೋಕಸಭಾ ಅಭ್ಯರ್ಥಿಯಾಗಿ ರಾಜ್ಯ ಕಾಂಗ್ರೆಸ್ ಮಣೆ ಹಾಕಬಹುದೇ ಅನ್ನುವುದು ನೋಡಬೇಕಾಗಿದೆ.

By admin

Leave a Reply

Your email address will not be published. Required fields are marked *

error: Content is protected !!