ಮಂಗಳೂರು: ಇನ್ನೇನು ಕೆಲವೇ ತಿಂಗಳು ಬಾಕಿ.. ದೇಶಾದ್ಯಂತ ಲೋಕಸಭೆ ಎಲೆಕ್ಷನ್ ಕಾವು ಜೋರಾಗಿದೆ. ದಿನದಿಂದ ದಿನಕ್ಕೆ ಅಭ್ಯರ್ಥಿಗಳು ಯಾರು ಸಮರ್ಥ ಎಂಬುದರ ಲೆಕ್ಕಾಚಾರದಲ್ಲಿ ಆಯಾ ಪಕ್ಷದವರು ಸನ್ನದ್ಧರಾಗಿದ್ದರೆ. ಅಭ್ಯರ್ಥಿಗಳ ಆಯ್ಕೆಯ ಬಗ್ಗೆ ಆಯಾ ಕ್ಷೇತ್ರಗಳಲ್ಲಿ ಕುತೂಹಲ ಕೌತುಕ. ಹೀಗಿರುವಾಗ ಲೋಕಸಭಾ ಚುನಾವಣೆಯ 2024 ದ.ಕ. ಜಿಲ್ಲೆಯ ಲೋಕಸಭಾ ಕ್ಷೇತ್ರ ಹಾಗೂ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿಗಳು ಯಾರಾಗಬಹುದೆಂಬ ಲೆಕ್ಕಾಚಾರಗಳು ನಡೆಯುತ್ತಿವೆ. ಅಷ್ಟೇ ಅಲ್ಲ ದ.ಕ. ಹಾಗೂ ಉಡುಪಿ ಚಿಕ್ಕಮಗಳೂರು ಲೋಕಸಭಾ ಚುನಾವಣೆಯ ಅಖಾಡ ಒಂದು ರೂಪ ಪಡೆದುಕೊಳ್ಳುತ್ತಿದೆ.

ಹೌದು ಮಂಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್ ಮತ್ತೊಮ್ಮೆ ಆಯ್ಕೆಯಾಗುವುದು ಪಕ್ಕ ಅದ್ರಲ್ಲಿ ಎರಡು ಮಾತಿಲ್ಲ. ಸಂಘಟನಾತ್ಮಕವಾಗಿ ನಳಿನ್ ಪ್ರಬಲವಾಗಿರುವುದೇ ಹಾಗೂ ಹೈಕಮಾಂಡ್ ಕೃಪಾಕಟಾಕ್ಷ ಈ ಆಯ್ಕೆಗೆ ಕಾರಣ ಎನ್ನಲಾಗುತ್ತಿದೆ. ಇನ್ನೊಂದು ಕಡೆ ಮಂಗಳೂರಿನ ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿಯಾಗಿ ಹಾಲಿ ಎಂಎಲ್ಸಿ ಹರೀಶ್ ಕುಮಾರ್ ಆಯ್ಕೆ ಆಗುವ ಸಾಧ್ಯತೆ ಬಹುತೇಕವಾಗಿ ಎದ್ದು ಕಾಣುತ್ತಿದೆ. ವಿಧಾನ ಪರಿಷತ್ತಿನಲ್ಲಿ ಜನಸಾಮಾನ್ಯರ ರೆವಿನ್ಯೂ ವಿಷಯಗಳಿಗೆ ಸಂಬಂಧಪಟ್ಟಂತೆ ಹಲವಾರು ಪ್ರಶ್ನೆಗಳನ್ನು ಎತ್ತಿರುವುದು ಹಾಗೂ ಪಕ್ಷದ ಒಳಗೆ ಎಲ್ಲರೊಂದಿಗೆ ಆತ್ಮೀಯತೆಯಿಂದ ಇರುವುದು. ಯಾರೊಂದಿಗೂ ವೈರತ್ವವಿಲ್ಲದ ಹರೀಶ್ ಕುಮಾರ್ ಅವರಿಗೆ ಪ್ಲಸ್ ಪಾಯಿಂಟ್ ಎನ್ನಲಾಗುತ್ತಿದೆ. ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಇವರು ಅತ್ಯಂತ ಜನಪ್ರಿಯತೆಯನ್ನು ಕಂಡವರು. ಎಲ್ಲರೊಂದಿಗೆ ಅತ್ಯಂತ ಸರಳತೆಯಿಂದ ಕೂಡಿಕೊಂಡು ಪಕ್ಷವನ್ನ ಬೆಳೆಸಿದ ಹೆಮ್ಮೆ ಕರಾವಳಿಗರಲ್ಲಿ ಕೇಳಿ ಬರುವ ಮಾತು. ಇವರಿಗೆ ಮತ್ತೊಂದು ಪ್ಲಸ್ ಪಾಯಿಂಟ್ ಜಾತಿ ಲೆಕ್ಕಾಚಾರ. ಬಿಲ್ಲವ ಸಮುದಾಯಕ್ಕೆ ಸೇರಿದ ಇವರು ಪ್ರಬಲ ನಾಯಕನೂ ಹೌದು. ಜಾತಿ ಬೆಂಬಲವೂ ಹರೀಶ್ ಕುಮಾರ್ ಮೇಲಿದೆ. ಹೀಗಿರುವಾಗ ಕಾಂಗ್ರೆಸ್ ನಿಂದ ದ.ಕ. ಜಿಲ್ಲೆ ಲೋಕಸಭಾ ಕ್ಷೇತ್ರಕ್ಕೆ ಹರೀಶ್ ಕುಮಾರ್ ಪ್ರಬಲ ಪೈಪೋಟಿ ಕೊಡಬಲ್ಲ ಅಭ್ಯರ್ಥಿ ಎಂಬುದು ಪಕ್ಕ. ಜೊತೆಗೆ ಬಿಜೆಪಿಯ ನಳೀನ್ ಕುಮಾರ್ ಕಟೀಲ್ ವಿರುದ್ಧ ಅಚ್ಚರಿ ಎಂಬಂತೆ ಗೆಲುವನ್ನು ಕಾಣಲು ಹರೀಶ್ ಕುಮಾರ್ ಅವರಿಂದ ಸಾಧ್ಯ ಎಂಬುದು ಕರಾವಳಿಯಲ್ಲಿ ಗುಸು ಗುಸು ಮಾತು ಆರಂಭವಾಗಿಬಿಟ್ಟಿದೆ. ಹಾಗಾಗಿಯೇ ಈ ಬಾರಿ ಹರೀಶ್ ಕುಮಾರ್ ಅವ್ರನ್ನ ಕಾಂಗ್ರೆಸ್ ದ.ಕ‌. ಲೋಕ ಅಭ್ಯರ್ಥಿಯಾಗಿ ಬಹುತೇಕ ಫೈನಲ್ ಮಾಡುವುದು ಪಕ್ಕ ಆಗಿದೆ.
ಉಳಿದಂತೆ ರಾಜಕೀಯ ಪಡಸಾಲೆಯ ಲೆಕ್ಕದಲ್ಲೂ ಬಿಜೆಪಿಯ ನಳೀನ್ ಗೆ ಈ ಬಾರಿ ಸೋಲಿನ ಆತಂಕವೂ ಇದೆ. ಹಾಗಾಗಿ ಕಾಂಗ್ರೆಸ್ ನಿಂದ ಸಮರ್ಥ ಅಭ್ಯರ್ಥಿಯಾಗಿ ಹರೀಶ್ ಕುಮಾರ್ ಅವ್ರನ್ನ ಕಣಕ್ಕಿಳಿಸಿದರೆ ಗೆಲುವು ಪಕ್ಕ ಎಂಬುದು ಗೋಚರವಾಗಿದೆ.

ಇತ್ತ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಆಯ್ಕೆಯಾಗುವ ಸಂಭವವಿದೆ ಎನ್ನಲಾಗುತ್ತಿದೆ. ಆಡಳಿತದ ಬಗ್ಗೆ ಉತ್ತಮ ಜ್ಞಾನ ಹೊಂದಿರುವ ಜಯಪ್ರಕಾಶ್ ಹೆಗ್ಡೆ ಜನಪ್ರಿಯತೆಯನ್ನು ಗಳಿಸಿಕೊಂಡಿರುವ ರಾಜಕೀಯ ನಾಯಕ. ಇರುವವರಿಗೆ ಪೂರಕವಾದ ಅಂಶ ಆಗಿದೆ ಎನ್ನಲಾಗುತ್ತಿದೆ.
ಈ ಬಾರಿ ಉಡುಪಿ ಚಿಕ್ಕಮಂಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಪ್ರಮೋದ್ ಮಧ್ವರಾಜ್ ಆಯ್ಕೆ ಆಗುವ ಸಂಭವವಿದೆ ಎನ್ನಲಾಗುತ್ತಿದೆ. ಶಾಸಕರಾಗಿ, ಮಂತ್ರಿಯಾಗಿ ಉತ್ತಮ ಕೆಲಸವನ್ನು ಮಾಡಿರುವ ಪ್ರಮೋದ್ ಮಧ್ವರಾಜ್ ಬಗ್ಗೆ ಜನರಲ್ಲಿ ಉತ್ತಮ ಒಲವು ಇದೆ ಎನ್ನಲಾಗುತ್ತಿದೆ.

ಉಡುಪಿ ಚಿಕ್ಕಮಗಳೂರು ಹಾಗೂ ಮಂಗಳೂರು ಲೋಕಸಭಾ ಕ್ಷೇತ್ರವನ್ನು ಎರಡು ಪಕ್ಷಗಳು ಗಂಭೀರವಾಗಿ ಪರಿಗಣಿಸಿದ್ದು ರಣತಂತ್ರವನ್ನು ರೂಪಿಸುತ್ತಿವೆ. ಬಂದಿರುವ ಮಾಹಿತಿಗಳ ಪ್ರಕಾರ ಪರಸ್ಪರ ಸ್ಪರ್ಧೆಗೆ ಒಂದು ಹಂತದ ಅಖಾಡ ಸಿದ್ಧವಾಗಿದೆ ಎನ್ನಲಾಗಿದೆ.

By admin

Leave a Reply

Your email address will not be published. Required fields are marked *

error: Content is protected !!