ಹಾವು ಕಡಿತಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು ಅವರನ್ನು ಸಂಸದ ನಳಿನ್ ಕುಮಾರ್ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

ಸಂಜೀವ ಮಠಂದೂರು ಅವರು ನ.16 ರಂದು ರಾತ್ರಿಯ ಹೊತ್ತು ತನ್ನ ಮನೆಯ ಬಳಿ ವಾಕಿಂಗ್ ಮಾಡುತ್ತಿದ್ದಾಗ ಅವರಿಗೆ ಕಡಂಬಳ (ಕಟ್ಟಮಳಕ್ಕರಿ) ಕಡಿದಿದ್ದು, ಕೂಡಲೇ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹಾವಿನ ಕಡಿತ ತರಚಿದಂತ ಗಾಯವಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ.

ಈ ಸಂದರ್ಭದಲ್ಲಿ ಮುರಳಿಕೃಷ್ಣ ಹಸಂತಡ್ಕ , ಚನಿಲ ತಿಮ್ಮ ಪ್ಪ ಶೆಟ್ಟಿ , ಆರ್.ಸಿ ನಾರಾಯಣ್, ಅರುಣ್ ವಿಟ್ಲ , ಸೀತಾರಾಮ ರೈ ಕೆದಂಬಾಡಿಗುತ್ತು ಸಹಿತ ಹಲವರು ಉಪಸ್ಥಿತರಿದ್ದರು.

By admin

Leave a Reply

Your email address will not be published. Required fields are marked *

error: Content is protected !!