ತೋಟದ ಕೆಲಸ ಸಂದರ್ಭ ಅಲ್ಯೂಮಿನಿಯಂ ಏಣಿ ವಿದ್ಯುತ್ ತಂತಿಗೆ ತಗುಲಿದ ಪರಿಣಾಮ ವಿದ್ಯುತ್‌ ಶಾಕ್‌ಗೆ ಒಳಗಾಗಿ ಕಾರ್ಮಿಕ ಸಾವನ್ನಪ್ಪಿದ ಘಟನೆ ಇಂದು ಬೆಳಗ್ಗೆ ಧರ್ಮಸ್ಥಳ ಗ್ರಾಮದ ಮಲ್ಲರ್ಮಾಡಿ ಎಂಬಲ್ಲಿ ನಡೆದಿದೆ.

ಧರ್ಮಸ್ಥಳ ಗ್ರಾಮದ ಮಲ್ಲರ್ಮಾಡಿ ನಿವಾಸಿ ಬಾಲಕೃಷ್ಣ ಶೆಟ್ಟಿ (46) ಮೃತ ದುರ್ದೈವಿ. ಬಾಲಕೃಷ್ಣ ಶೆಟ್ಟಿ ಅವರು ಇಂದು ಬೆಳಿಗ್ಗೆ ಸ್ಥಳೀಯ ಬೊಮ್ಮಣ್ಣ ಗೌಡ ಎಂಬವರ ಮನೆಗೆ ತೋಟದ ಕೆಲಸಕ್ಕೆ ಹೋಗಿದ್ದು, ತೋಟದಲ್ಲಿ ಸೊಪ್ಪು ಕಡಿಯಲು ಅಲ್ಯೂಮಿನಿಯಂ ಏಣಿಯನ್ನು ಎತ್ತಿಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ತೋಟದ ನಡುವಿನಲ್ಲಿ ಹಾದು ಹೋಗಿದ್ದ ವಿದ್ಯುತ್ ಲೈನ್ ತಾಗಿ ವಿದ್ಯುತ್ ಶಾಕ್ ತಗುಲಿದೆ.

ಪರಿಣಾಮ ತೀವ್ರ ಅಸ್ವಸ್ಥಗೊಂಡ ಅವರನ್ನು ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆ ತಂದರೂ, ಆ ವೇಳೆಗೆ ಮೃತಪಟ್ಟಿದ್ದರು. ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೆಸ್ಕಾಂ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ತೋಟದಲ್ಲಿ ಹಾದು ಹೋಗಿದ್ದ ವಿದ್ಯುತ್ ತಂತಿ ಲೈನ್ ಬದಲಾಯಿಸಲು ಹಲವು ಬಾರಿ ಇಲಾಖೆಗೆ ಮನವಿ ಸಲ್ಲಿಸಿದರೂ, ಸ್ಪಂದಿಸಿಲ್ಲ ಎಂದು ಸ್ಥಳೀಯರು ಆಕ್ರೋಶ ತೋಡಿಕೊಂಡಿದ್ದಾರೆ.

By admin

Leave a Reply

Your email address will not be published. Required fields are marked *

error: Content is protected !!