ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಪುತ್ತೂರು ತಾಲೂಕು ಆಸ್ಪತ್ರೆಯಲ್ಲಿದ್ದ ಬುರ್ಖಾ ತೆಗೆದು ಒಳಗೆ ಬನ್ನಿ ಎಂಬ ಸೂಚನಾ ಫಲಕವನ್ನು ತೆರವುಗೊಳಿಸಲಾಗಿದೆ.

ಕಳೆದ ಕೆಲವು ದಿನಗಳ ಹಿಂದೆ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ರೋಗಿಗಳ ರೂಮ್ ಬಾಗಿಲಿನಲ್ಲಿ ಈ ಘಲಕವನ್ನು ನೇತು ಹಾಕಲಾಗಿತ್ತು . ಆದರೆ ಯಾರೋ ಒಬ್ಬರು ಈ ಸೂಚನ ಫಲಕದ ಪೋಟೋವನ್ನು ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದರು.

ಪೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದ್ದಂತೆ, ಸೂಚನಾ ಫಲಕವನ್ನು ತೆರವುಗೊಳಿಸಬೇಕೆಂಬ ಆಗ್ರಹ ದೊಡ್ಡ ಮಟ್ಟದಲ್ಲಿ ಕೇಳಿ ಬಂದಿತ್ತು. ಈ ನಿಟ್ಟಿನಲ್ಲಿ ಇದೀಗ ಸೂಚನಾ ಫಲಕವನ್ನು ತೆಗೆದು ಹಾಕಲಾಗಿದೆ.

By admin

Leave a Reply

Your email address will not be published. Required fields are marked *

error: Content is protected !!