ಕರ್ನಾಟಕ ಪ್ರಾಂತೀಯ ಕಥೋಲಿಕ ಧರ್ಮಾಧ್ಯಕ್ಷರ ಮಂಡಳಿಯ ಆಶ್ರಯದಲ್ಲಿರುವ ಸಂದೇಶ ಸಂಸ್ಕೃತಿ ಮತ್ತು ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಸಂದೇಶ ಪ್ರಶಸ್ತಿ ಪ್ರದಾನ ಸಮಾರಂಭ ಫೆ. 11ರಂದು ಸಂಜೆ 5:30ಕ್ಕೆ ಸಂದೇಶ ಸಂಸ್ಥೆ ಆವರಣದಲ್ಲಿ ನಡೆಯಲಿದೆ ಎಂದು ಪ್ರತಿಷ್ಠಾನದ ನಿರ್ದೇಶಕ ವಂ. ಡಾ. ಸುದೀಪ್ ಪಾಲ್ ಎಂಎಸ್ ಎಫ್ ಎಸ್ ತಿಳಿಸಿದರು.
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾರಂಭದ ಅಧ್ಯಕ್ಷತೆಯನ್ನು ಬೆಂಗಳೂರಿನ ಆರ್ಚ್ ಬಿಷಪ್ ಮತ್ತು ಕರ್ನಾಟಕ ಪ್ರಾದೇಶಿಕ ಬಿಷಪ್ ಸಮ್ಮೇಳನದ ಅಧ್ಯಕ್ಷರಾದ ಅ. ವಂ. ಡಾ. ಪೀಟರ್ ಮಚಾದೋ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್, ಬಳ್ಳಾರಿಯ ಬಿಷಪ್ ಮತ್ತು ಸಂಸ್ಥೆಯ ಅಧ್ಯಕ್ಷರು ಅ ವಂ. ಡಾ. ಹೆನ್ರಿ ಡಿಸೋಜ, ಮಂಗಳೂರಿನ ಬಿಷಪ್ ಅ. ವಂ. ಡಾ. ಪೀಟರ್ ಪೌಲ್ ಸಲ್ದಾನ್ಹಾ, ಉಡುಪಿಯ ಬಿಷಪ್ ಅ. ವಂ. ಡಾ. ಜೆರಾಲ್ಡ್ ಐಸಾಕ್ ಲೋಬೋ, ಸಂಸ್ಥೆಯ ಟ್ರಸ್ಟಿ ಫಾ. ಐವನ್ ಪಿಂಟೋ ಭಾಗವಹಿಸಲಿದ್ದಾರೆ ಎಂದರು.
ಸಂಸ್ಥೆಯ ಟ್ರಸ್ಟಿ ರಾಯ್ ಕ್ಯಾಸ್ಪೆಲಿನೊ, ಆಯ್ಕೆ ಸಮಿತಿ ಅಧ್ಯಕ್ಷ ಚಿನ್ನಪ್ಪ ಗೌಡ, ಸದಸ್ಯ ಅಡ್ವಕೇಟ್ ಬಿ.ಎ. ಮುಹಮ್ಮದ್ ಹನೀಫ್ ಉಪಸ್ಥಿತರಿದ್ದರು.
2024ರ ಸಂದೇಶ ಪ್ರಶಸ್ತಿ ಪುರಸ್ಕೃತರು:
ಸಂದೇಶ ಸಾಹಿತ್ಯ ಪ್ರಶಸ್ತಿ (ಕನ್ನಡ): ಪ್ರೊ. ಬಿ.ಎ.ವಿವೇಕ ರೈ
ಸಂದೇಶ ಸಾಹಿತ್ಯ ಪ್ರಶಸ್ತಿ (ಕೊಂಕಣಿ): ವಲೇರಿಯನ್ ಕ್ವಾಡ್ರಸ್
ಸಂದೇಶ ಸಾಹಿತ್ಯ ಪ್ರಶಸ್ತಿ (ತುಳು): ಮುದ್ದು ಮೂಡುಬೆಳ್ಳ
ಸಂದೇಶ ಮಾಧ್ಯಮ ಪ್ರಶಸ್ತಿ: ಅಬ್ದುಸ್ಸಲಾಮ್ ಪುತ್ತಿಗೆ
ಸಂದೇಶ ಕೊಂಕಣಿ ಸಂಗೀತ ಪ್ರಶಸ್ತಿ: ಆಲ್ವಿನ್ ಡಿಕುನ್ಹಾ
ಸಂದೇಶ ಕಲಾ ಪ್ರಶಸ್ತಿ: ಚಂದ್ರನಾಥ ಆಚಾರ್ಯ
ಸಂದೇಶ ಶಿಕ್ಷಣ ಪ್ರಶಸ್ತಿ: ಹುಚ್ಚಮ್ಮ ಚೌದ್ರಿ
ಸಂದೇಶ ವಿಶೇಷ ಪ್ರಶಸ್ತಿ: ಜನ ಶಿಕ್ಷಣ ಸೇವಾ ಟ್ರಸ್ಟ್