ತಂದೆಯ ಜೊತೆ ಶಾಲೆಯಿಂದ ಸ್ಕೂಟಿಯಲ್ಲಿ ಮುಕ್ಕದ ಮನೆಗೆ ಬರುತ್ತಿದ್ದಾಗ ಬಾಲಕಿಯ ಮೇಲೆ ಲಾರಿಯೊಂದು ಹರಿದ ಘಟನೆ ಮುಕ್ಕ ಇಂಡಿಯನ್ ಪೆಟ್ರೋಲ್ ಪಂಪ್ ಬಳಿಯ ಸರ್ವಿಸ್ ರಸ್ತೆಯಲ್ಲಿ ನಡೆದಿದೆ.

ಮುಕ್ಕ ಮಿತ್ರಪಣ್ನ ನಿವಾಸಿ ಯಶವಂತ್ ಎಂಬವರ ಮಗಳು ಬಾಲಕಿಯ ಮಾನ್ವಿ(12) ಮೃತರು ಎಂದು ಗುರುತಿಸಲಾಗಿದೆ.

ತಂದೆಯ ಜೊತೆ ಶಾಲೆಯಿಂದ ಸ್ಕೂಟಿಯಲ್ಲಿ ಮುಕ್ಕದ ಸ್ವಾನಿವಾಸಕ್ಕೆ ಹೋಗುತ್ತಿದ್ದಾಗ ಹಿಂದಿನಿಂದ ಬಂದ ಲಾರಿಯೊಂದು ಸ್ಕೂಟರಿಗೆ ಡಿಕ್ಕಿ ಹೊಡೆದಿದ್ದು ಡಿಕ್ಕಿಯ ರಭಸಕ್ಕೆ ಸ್ಕೂಟರ್ ಸವಾರ ಮತ್ತು ಬಾಲಕಿ ರಸ್ತೆಗೆ ಎಸೆಯಲ್ಪಟ್ಟಿದ್ದು ಮಗುವಿನ ಮೇಲೆ ಲಾರಿ ಹರಿದಿದ್ದು ಮಾನ್ವಿ ಮೃತಪಟ್ಟಿದ್ದಾರೆ.

ಲಾರಿ ಚಾಲಕ ಘಟನಾ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದು ಸ್ಥಳೀಯರು ಚಾಲಕನಿಗೆ ಹಲ್ಲೆ ನಡೆಸಿದ್ದಾರೆ. ಬಳಿಕ ಸುರತ್ಕಲ್ ಪೊಲೀಸರು ಸ್ಥಳಕ್ಕೆ ಆಗಮಿಸಿ ಲಾರಿ ಹಾಗೂ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ

By admin

Leave a Reply

Your email address will not be published. Required fields are marked *

error: Content is protected !!