ಮಂಗಳೂರಿ‌ನ ಪಡೀಲ್ ಸಮೀಪ ಉಳ್ಳಾಲಕ್ಕೆ ನೀರು ಸರಬರಾಜು ಮಾಡುವ ಮುಖ್ಯ ಪೈಪ್ ಲೈನ್ ಒಡೆದ ಪರಿಣಾಮ ದುರಸ್ತಿ ಕಾರ್ಯಕ್ಕಾಗಿ ಉಳ್ಳಾಲ ನಗರಕ್ಕೆ ಒಂದು ವಾರದ ಕಾಲ ನೀರು ಸರಬರಾಜು ಇರುವುದಿಲ್ಲ ಎಂದು ಉಳ್ಳಾಲ ನಗರಸಭೆ ಪ್ರಕಟಣೆಯಲ್ಲಿ ತಿಳಿಸಿದೆ.

ಫೆ. 6 ರಂದು ಪಂಪ್ವೆಲ್ ಮಹಾವೀರ ವೃತ್ತ ಸಮೀಪದ ಪಡೀಲ್ ರೋಹನ್ ಸ್ಕ್ವೇರ್‌ ಕಟ್ಟಡದ ಮುಂಭಾಗದಲ್ಲಿ ತುಂಬೆ ಅಣೆಕಟ್ಟಿನಿಂದ ಉಳ್ಳಾಲಕ್ಕೆ ನೀರು ಸರಬರಾಜು ಮಾಡುವ ಮುಖ್ಯ ಪೈಪ್ ಲೈನ್ ಹಾನಿಯಾಗಿದೆ.

ಈ ನಿಟ್ಟಿನಲ್ಲಿ ದುರಸ್ತಿ ಕಾರ್ಯಕ್ಕಾಗಿ ಒಂದು ವಾರದ ಸಮಯ ಬೇಕಾಗಿರುವುದರಿಂದ ಉಳ್ಳಾಲ ನಗರಕ್ಕೆ ನೀರು ಇರುವುದಿಲ್ಲ. ಸಾರ್ವಜನಿಕರು ಸಹಕರಿಸಬೇಕು ಎಂದು ಉಳ್ಳಾಲನಗರಸಭೆ ಪ್ರಕಟಣೆಯಲ್ಲಿ ತಿಳಿಸಿದೆ.

By admin

Leave a Reply

Your email address will not be published. Required fields are marked *

error: Content is protected !!