ಮಂಗಳೂರು, ಫೆ. 10: ನಗರದ ಖಾಸಗಿ ಶಾಲೆಯ ಅನ್ಯ ಸಮುದಾಯದ ಶಿಕ್ಷಕಿಯೊಬ್ಬರು ಶ್ರೀರಾಮನನ್ನು ಅವಹೇಳನ ಮಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಹಿಂದೂ ಸಂಘಟನೆಗಳು ಹಾಗೂ ಪೋಷಕರು ಶಾಲೆಯ ಮುಂಭಾಗ ಧರಣಿ ನಡೆಸಿದ ಘಟನೆ ಶನಿವಾರ ಮಂಗಳೂರಿನಲ್ಲಿ ವರದಿಯಾಗಿದೆ.

ಖಾಸಗಿ ಶಾಲೆಯ ಶಿಕ್ಷಕಿ ಆರೋಪವನ್ನು ಎದುರಿಸುತ್ತಿದ್ದು, ತರಗತಿಯಲ್ಲಿ ಶ್ರೀರಾಮನ ಬಗ್ಗೆ ಅಪಪ್ರಚಾರ ನಡೆಸಿದ್ದಾರೆ. ಹಿಂದೂ ಧರ್ಮದ ಅವಹೇಳನ ಮಾಡಿದ್ದಾರೆ. ಎಂಬ ಮಹಿಳೆಯೊಬ್ಬರ ಆಡಿಯೋ ವೈರಲ್ ಆಗಿದೆ. ಇದರ ಬೆನ್ನಲ್ಲೇ ಶಾಲೆಯ ಮುಂಭಾಗ ಧರಣಿ ಆರಂಭಗೊಂಡಿದೆ. ಇದಾದ ಕೆಲ ಹೊತ್ತಿನಲ್ಲಿ ಕೆಲವು ರಾಜಕೀಯ ನಾಯಕರು ಶಾಲೆಯತ್ತ ದೌಡಾಯಿಸಿ ಮಾತುಕತೆ ನಡೆಸಿದ್ದಾರೆ.

ವಿದ್ಯಾರ್ಥಿಗಳು ಹೇಳಿರುವ ವಿಚಾರ ಪೋಷಕರು ನಂಬಿದ ಬಳಿಕ ವಿವಾದ ಹುಟ್ಟಿಕೊಂಡಿದೆ. ಪ್ರಕರಣಡ ಸತ್ಯಾಸತ್ಯತೆ ಇನ್ನಷ್ಟೇ ಬಹಿರಂಗಗೊಳ್ಳಬೇಕಿದೆ.

By admin

Leave a Reply

Your email address will not be published. Required fields are marked *

error: Content is protected !!