ಪುತ್ತೂರು:  ಉಳ್ಳಾಲ ಕೋಟೆಕಾರ್ ಬಳಿಯ ಮಾಡೂರಿನ ಪಿಜಿಯಿಂದ ಫೆ.17 ರಂದು ನಾಪತ್ತೆಯಾಗಿದ್ದ ಚೈತ್ರಾ ಹೆಬ್ಬಾರ್ ಚಲಾಯಿಸಿದ ಸ್ಕೂಟರ್ ಫೆ.25ರಂದು ಸುರತ್ಕಲ್ ಬಳಿ ಪತ್ತೆಯಾಗಿದ್ದು, ಆದರೆ ಚೈತ್ರಾ ಇನ್ನೂ ಪತ್ತೆಯಾಗಿಲ್ಲ.

ಮಾಡೂರಿನ ಪಿಜಿ ಯಿಂದ ಫೆ.17 ರಂದು ಮುಂಜಾನೆ 9 ಗಂಟೆಗೆ ಚೈತ್ರಾ ಇದೇ ಸ್ಕೂಟರ್‌ನಲ್ಲಿ ತೆರಳಿದ್ದರು. ಬಳಿಕ ನಾಪತ್ತೆಯಾಗಿದ್ದ ಚೈತ್ರಾ ಸುಳಿವು ಸಿಗದೆ ಹಿನ್ನೆಲೆಯಲ್ಲಿ ಚೈತ್ರಾ ದೊಡ್ಡಪ್ಪ ಉಳ್ಳಾಲ ಪೊಲೀಸರಿಗೆ ದೂರು ನೀಡಿದ್ದರು. ಹಿಂದೂ ಸಂಘಟನೆಗಳೂ ಇದೊಂದು ಲವ್‌ ಜಿಹಾದ್ ಪ್ರಕರಣವೆಂದು ಆರೋಪಿಸಿ ಹೋರಾಟದ ಎಚ್ಚರಿಕೆ ನೀಡಿದ್ದವು. ಇದಾದ ಬಳಿಕ ತನಿಖೆ ಚುರುಕುಗೊಳಿಸಿದ ಪೊಲೀಸರಿಗೆ ಇದೀಗ ಚೈತ್ರಾಳ ಸ್ಕೂಟರ್ ಪತ್ತೆಯಾಗಿದೆ. ಚೈತ್ರಾ ಪಿಜಿಯಿಂದ ಹೊರಟ ಬಳಿಕ ಪಂಪ್‌ವೆಲ್ ಬಳಿ ಮೊಬೈಲ್ ಆಫ್ ಮಾಡಿಕೊಂಡಿದ್ದು ಬಳಿಕ ಸುರತ್ಕಲ್‌ಗೆ ಬಂದು ಅಲ್ಲಿ ಎಟಿಎಂನಲ್ಲಿ ಹಣ ಡ್ರಾ ಮಾಡಿದ್ದರು, ಬ್ಯಾಂಕ್ ಖಾತೆಯನ್ನು ಬ್ಲಾಕ್ ಮಾಡಿಸಿರುವ ಪೊಲೀಸರು ಶಂಕಿತ ಯುವಕನ ಬಗ್ಗೆಯೂ ಮಾಹಿತಿ ಕಲೆ ಹಾಕುತ್ತಿದ್ದಾರೆ. ಆದ್ರೆ ಆತನ ಮೊಬೈಲ್ ಕೂಡಾ ಸ್ವಿಚ್‌ ಆಫ್ ಆಗಿರುವ ಕಾರಣ ಚೈತ್ರಾ ಆತನ ಜೊತೆಯಲ್ಲಿ ಹೋಗಿರುವ ಬಲವಾದ ಅನುಮಾನ ಮೂಡಿದೆ. ಕೇರಳ ಅಥವಾ ಬೆಂಗಳೂರಿಗೆ ಹೋಗಿರುವ ಸಾಧ್ಯತೆ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

By admin

Leave a Reply

Your email address will not be published. Required fields are marked *

error: Content is protected !!