ನೀರಿನಲ್ಲಿ ಮುಳುಗಿ 10ನೇ ತರಗತಿಯ ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಸುರತ್ಕಲ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಎಸ್ ಎಸ್ ಎಲ್ ಸಿ ಪರೀಕ್ಷೆಯ ಸಿದ್ಧತೆಯಲ್ಲಿದ್ದ ವಿದ್ಯಾರ್ಥಿಗಳು ಮಂಗಳವಾರ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದರು. ಬಳಿಕ ಹುಡುಕಾಟ ತೀವ್ರಗೊಳಿಸಲಾಗಿತ್ತು. ತಡರಾತ್ರಿ ವಿದ್ಯಾರ್ಥೊಗಳ ಮೃತದೇಹ ಪತ್ತೆಯಾಗಿದೆ. ವೆನ್ಲಾಕ್ ಆಸ್ಪತ್ರೆಯಲ್ಲಿ ಶವ ಮಹಜರು ನಡೆಸಲಾಗುತ್ತಿದೆ.

ಸುರತ್ಕಲ್ ನ ಖಾಸಗಿ ಶಾಲೆಯ ವಿಧ್ಯಾರ್ಥಿಗಳಾದ ಯಶ್ವಿತ್, ನಿರೂಪ್, ಅನ್ವಿತ್, ರಾಘವೇಂದ್ರ ಮೃತ ವಿದ್ಯಾರ್ಥಿಗಳಾಗಿದ್ದು ಹತ್ತನೇ ತರಗತಿ ಕಲಿಯುತ್ತಿದ್ದರು. ನಾಲ್ವರು ವಿಧ್ಯಾರ್ಥಿಗಳು ಮಂಗಳವಾರ ಮಧ್ಯಾಹ್ನ ಇಂಗ್ಲಿಷ್ ಪ್ರಿಪರೇಟರಿ ಪರೀಕ್ಷೆ ಬರೆದ ಬಳಿಕ ನಾಪತ್ತೆಯಾಗಿದ್ದರು.

By admin

Leave a Reply

Your email address will not be published. Required fields are marked *

error: Content is protected !!