ಟಿಪ್ಪರ್ ಲಾರಿ ಹಾಗೂ ಬೈಕ್ ನಡುವೆ ಉಂಟಾದ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಶುಕ್ರವಾರ ಬೆಳಿಗ್ಗೆ ಬಂದ್ಯೋಡು ಬಳಿಯ ಮುಟ್ಟಂ ಗೇಟ್ ಬಳಿ ನಡೆದಿದೆ.

ಉಪ್ಪಳ ನಯಾಬಜಾರಿನ ಮುಹಮ್ಮದ್ ಮುಸಾಬ್ ( 20) ಮತ್ತು ಮಂಜೇಶ್ವರ ವಾಮಂಜೂರಿನ ಮುಹಮ್ಮದ್ ಅಮೀನ್ ಮಹರೂಫ್ ( 20) ಮೃತ ಪಟ್ಟವರು.ಇಬ್ಬರೂ ಮಂಗಳೂರು ಖಾಸಗಿ ಕಾಲೇಜಿನ ವಿದ್ಯಾರ್ಥಿಗಳಾಗಿದ್ದರು.

ಕಾಸರಗೋಡಿಗೆ ತೆರಳಿ ಮನೆಗೆ ಮರಳುತ್ತಿದ್ದಾಗ ರಾಷ್ಟೀಯ ಹೆದ್ದಾರಿ ಕಾಮಗಾರಿಯ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದ್ದು , ಗಂಭೀರ ಗಾಯಗೊಂಡ ಇಬ್ಬರನ್ನೂ ಮಂಗಳೂರು ಆಸ್ಪತ್ರೆಗೆ ದಹಲಿಸಿದರೂ ಮುಸಾಬ್ ಮಧ್ಯಾಹ್ನ ಹಾಗೂ ಮಹರೂಫ್ ಸಂಜೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು.

ಅಪಘಾತದ ರಭಸಕ್ಕೆ ಇಬ್ಬರೂ, ರಸ್ತೆಗೆಸೆಯಲ್ಪಟ್ಟಿದ್ದು ಗಂಭೀರ ಗಾಯಗೊಂಡಿದ್ದರು.. ಕಾಸರಗೋಡಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಬೈಕ್ ನಲ್ಲಿ ಮನೆಗೆ ಮರಳುತ್ತಿದ್ದರು. ಇಬ್ಬರ ಮೃತದೇಹಗಳನ್ನು ಮಂಜೇಶ್ವರ ಪೊಲೀಸರು ಮಹಜರು ನಡೆಸಿದರು.

By admin

Leave a Reply

Your email address will not be published. Required fields are marked *

error: Content is protected !!