ನವದೆಹಲಿ: ಅಚ್ಚರಿ ಮೇಲೆ ಅಚ್ಚರಿ ನಿರ್ಧಾರ ಕೈಗೊಳ್ಳುತ್ತಿರುವ ಬಿಜೆಪಿ ಹೈಕಮಾಂಡ್ ಎರಡನೇ ಅಚ್ಚರಿ ನೀಡಿದೆ. ಮಾಹಾರಾಷ್ಟ್ರ ರಾಜಕೀಯದಲ್ಲಿ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು ಮೈತ್ರಿ ಸರ್ಕಾರದಲ್ಲಿ ದೇವೇಂದ್ರ ಫಡ್ನವೀಸ್ ಉಪ ಮುಖ್ಯಮಂತ್ರಿಯಾಗಲಿದ್ದಾರೆ.
ಏಕನಾಥ್ ಶಿಂಧೆ ಮುಖ್ಯಮಂತ್ರಿಯಾಗಲಿದ್ದಾರೆ. ಶಿವಸೇನೆ- ಬಿಜೆಪಿ ಸರ್ಕಾರದ ಭಾಗವಾಗಿ ನಾನು ಇರುವುದಿಲ್ಲ ಎಂದು ಇಂದು ಸಂಜೆ ಸುದ್ದಿಗೋಷ್ಠಿಯಲ್ಲಿ ಫಡ್ನವೀಸ್ ತಿಳಿಸಿದ್ದರು. ಆದರೆ ಸಂಜೆ 6:30ರ ವೇಳೆ ದೇವೇಂದ್ರ ಫಡ್ನವೀಸ್ ಡಿಸಿಎಂ ಪಟ್ಟವನ್ನು ಅಲಂಕರಿಸಬೇಕೆಂದು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮನವಿ ಮಾಡಿದ್ದಾರೆ.