ಭಾರೀ ಮಳೆಯ ಹಿನ್ನೆಲೆ ನಾಳೆ (ಜುಲೈ 1) ಕಾಸರಗೋಡು ಮತ್ತು ಮಂಜೇಶ್ವರ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಅಂಗನವಾಡಿಗಳಿಗೆ ರಜೆ ಘೋಷಿಸಿ ಕಾಸರಗೋಡು ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ರಣವೀರ್ ಚಂದ್ ಆದೇಶಿಸಿದ್ದಾರೆ.
ನಾಳೆ(ಜುಲೈ 1) ರಂದು ಶಾಲೆಗಳು ಮತ್ತು ಅಂಗನವಾಡಿಗಳಿಗೆ ಮಾತ್ರ ರಜೆ ಘೋಷಿಸಿದ್ದು, ಕಾಲೇಜುಗಳಿಗೆ ರಜೆ ಅನ್ವಯವಾಗುವುದಿಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ.