ಆಪರೇಷನ್‌ ಕಮಲ ನಾಯಕರಿಗೆ ತಕ್ಕ ಪಾಠ ಕಲಿಸಿದ ಮತದಾರರು

ಕಳೆದ ಚುನಾವಣೆಯಲ್ಲಿ ಆಪರೇಷನ್‌ ಕಮಲದಡಿ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ್ದ ಬಹುತೇಕ ಎಲ್ಲ ನಾಯಕರಿಗೂ ಮತದಾರರು ಈ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಿ ಮನೆಗೆ ಕಳುಹಿಸಿದ್ದಾರೆ. ಸಚಿವರಾದ ಕೆ.ಸುಧಾಕರ್‌, ಎಂಟಿಬಿ ನಾಗರಾಜ್‌, ನಾರಾಯಣಗೌಡ, ಬಿಸಿ ಪಾಟೀಲ್‌ ಅವರಿಗೆ ಹೀನಾಯ ಸೋಲು ಆಗಿದೆ.

ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧೆಗೆ ಇಳಿದಿದ್ದ ಪ್ರದೀಪ್ ಈಶ್ವರ್‌ಗೆ ಗೆಲುವಾಗಿದೆ. 57,878 ಮತಗಳನ್ನು ಗಳಿಸಿದ ಸುಧಾಕರ್ ಅವರನ್ನು ಪ್ರದೀಪ್ ಈಶ್ವರ್ 69,008 ಮತಗಳನ್ನು ಗಳಿಸುವ ಮೂಲಕ ಸೋಲಿಸಿದ್ದಾರೆ.

ಹೊಸಕೋಟೆ ಕ್ಷೇತ್ರದಲ್ಲಿ ಕಾಂಗ್ರೆಸ್​ನ ಶರತ್ ಬಚ್ಚೇಗೌಡ ಗೆಲುವು ಸಾಧಿಸಿದ್ದು ಎಂಟಿಬಿ ನಾಗರಾಜ್​ಗೆ ಮುಖಭಂಗವಾಗಿದೆ.

ಆ ಮೂಲಕ ಕಳೆದ ಬಾರಿಯ ಚುನಾವಣೆಯಲ್ಲಿ ಆಪರೇಷನ್‌ ಕಮಲದಡಿ ಸರ್ಕಾರದಲ್ಲಿ ಮಂತ್ರಿಯಾಗಿದ್ದ ಹೆಚ್ಚಿನ ಲೀಡರ್‌ಗಳಿಗೆ ಮತದಾರರು ಸೋಲಿನ ರುಚಿ ಉಣಿಸಿರುವುದು ಗಮನಾರ್ಹ

error: Content is protected !!